ಉಚಿತ ವೈದ್ಯಕೀಯ ಮತ್ತು ರಕ್ತದಾನ ಶಿಬಿರ 2019

*ಮಂಗಳೂರು ನಂತೂರು ಭಾರತೀ ಸಮೂಹ ಸಂಸ್ಥೆಗಳು : ಉಚಿತ ವೈದ್ಯಕೀಯ, ದಂತ, ಕಣ್ಣು ತಪಾಸಣೆ ಶಿಬಿರ, ರಕ್ತದಾನ ಶಿಬಿರ*

ಮಂಗಳೂರು ಜ.20 : ನಿಟ್ಟೆ ವಿಶ್ವವಿದ್ಯಾನಿಲಯ, ಶ್ರೀ ಭಾರತೀ ಸಮೂಹ ಸಂಸ್ಥೆಗಳು, ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ಎ.ಬಿ. ಶೆಟ್ಟಿ ದಂತ ವಿದ್ಯಾಲಯ, ಮುಜುಂಗಾವು ಶ್ರೀ ಭಾರತೀ ನೇತ್ರ ಚಿಕಿತ್ಸಾಲಯಗಳ ಸಹಯೋಗದಲ್ಲಿ ವೈದ್ಯಕೀಯ ಮತ್ತು ದಂತ ತಪಾಸಣೆ ಶಿಬಿರ ಹಾಗೂ ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಮತ್ತು ರಕ್ತನಿಧಿ ಸರಕಾರಿ ವೆನ್ಲಾಕ್ ಆಸ್ಪತ್ರೆ, ಮಂಗಳೂರು ಇದರ ವತಿಯಿಂದ ರಕ್ತದಾನ ಶಿಬಿರ ರವಿವಾರ ಶ್ರೀ ಭಾರತೀ ಸಮೂಹ ಸಂಸ್ಥೆಗಳ ವಠಾರದಲ್ಲಿ ಎನ್ನೆಸ್ಸೆಸ್ ಘಟಕದ ಸಹಕಾರದಲ್ಲಿ ಆಯೋಜಿಸಲಾಗಿತ್ತು.
        ಸುವರ್ಣ ಮಹೋತ್ಸವ ಆಚರಿಸುತ್ತಿರುವ ವಿಟ್ಲ ಬೆನಕ ಕ್ಲಿನಿಕ್‌ನ ಡಾ.ಅರವಿಂದ್ ಅವರು ಉದ್ಘಾಟಿಸಿದರು. ಶ್ರೀ ಭಾರತೀ ಸಮೂಹ ಸಂಸ್ಥೆಗಳ ಕಾರ್ಯಾಧ್ಯಕ್ಷ ಶ್ರೀ ಗಣೇಶಮೋಹನ ಕಾಶಿಮಠ ಅಧ್ಯಕ್ಷತೆ ವಹಿಸಿದ್ದರು.
        ಮುಖ್ಯ ಅತಿಥಿಗಳಾಗಿ ದ.ಕ.-ಕಾಸರಗೋಡು ಹವ್ಯಕ ಮಹಾ ಜನಸಭಾ ಅಧ್ಯಕ್ಷ ಶ್ರೀ ಎನ್.ಕೃಷ್ಣ ಭಟ್, ಮಂಗಳೂರು ಹವ್ಯಕ ಸಭಾ ಅಧ್ಯಕ್ಷ ಶ್ರೀ ಬಾಲಸುಬ್ರಹ್ಮಣ್ಯ ಕಬೆಕ್ಕೋಡು, ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಮುರಳಿಮೋಹನ ಚೂಂತಾರು, ಯೋಗ ನಿರ್ದೇಶಕ ಶ್ರೀ ಗೋಪಾಲಕೃಷ್ಣ ಭಟ್ ದೇಲಂಪಾಡಿ ಉಪಸ್ಥಿತರಿದ್ದರು.
    ಗೌರವ ಸಲಹೆಗಾರ ಡಾ.ರಾಜೇಂದ್ರಪ್ರಸಾದ್ ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀ ಶ್ರೀಕೃಷ್ಣ ನೀರಮೂಲೆ ಕಾರ್ಯಕ್ರಮ ನಿರ್ವಹಿಸಿದರು. ಪ್ರಾಂಶುಪಾಲ ಡಾ.ಈಶ್ವರಪ್ರಸಾದ್ ಎ. ವಂದಿಸಿದರು.
         ವೈದ್ಯಕೀಯ, ಶಸ್ತ್ರಚಿಕಿತ್ಸೆ, ನೇತ್ರ, ಸ್ತ್ರೀರೋಗ, ಮಕ್ಕಳ, ಆಯುರ್ವೇದ, ದಂತ ಮತ್ತು ಯೋಗ ವಿಭಾಗಗಳಲ್ಲಿ ನುರಿತ ತಜ್ಞ ವೈದ್ಯರ ಸೇವೆಯನ್ನು ಒದಗಿಸಲಾಗಿತ್ತು. 300ಕ್ಕೂ ಅಧಿಕ ಮಂದಿ ಇದರ ಪ್ರಯೋಜನವನ್ನು ಪಡೆದರು. 25ಕ್ಕೂ ಅಧಿಕ ಮಂದಿ ರಕ್ತದಾನ ಮಾಡಿದರು.
Highslide for Wordpress Plugin