ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ ಸಮಾರಂಭ

ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ ಸಮಾರಂಭ  ನಡೆಯಿತು.

ಸಮಾರಂಭದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಸೇವಾ ಸಮಿತಿಯ ಕಾರ್ಯಾಲಯ ಕಾರ್ಯದರ್ಶಿಗಳಾದ ಶ್ರೀ ಎಂ.ಟಿ ಭಟ್ ಅವರು ಮಾತನಾಡುತ್ತಾ  ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಅವರ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿ ಹಲವಾರು ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚಿನ ಅವಕಾಶ ನೀಡಿ ಸಂಸ್ಕಾರವಂತ ವ್ಯಕ್ತಿಗಳನ್ನು ನಮ್ಮ ಸಂಸ್ಥೆ ಸಮಾಜಕ್ಕೆ ನೀಡುತ್ತಿರುವುದು  ಹೆಮ್ಮೆಯ ವಿಚಾರ ಎಂದರು.

ಪ್ರಾಂಶುಪಾಲರಾದ ಗಂಗಾರತ್ನ ವಿದ್ಯಾರ್ಥಿಗಳಿಗೆ ಹಿತವಚನ ನೀಡಿದರು.

  ಕಾರ್ಯಕ್ರಮದಲ್ಲಿ ಜ್ಞಾನ ಸ್ವರೂಪಿಯಾದ ದೀಪವನ್ನು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿದರು.

  ಇದೇ ಸಂದರ್ಭದಲ್ಲಿ ತರಗತಿಯಲ್ಲಿ ಅತ್ಯುತ್ತಮ ವಿದ್ಯಾರ್ಥಿಗಳೆಂದು ಪರಿಗಣಿಸಲ್ಪಟ್ಟ ದ್ವಿತೀಯ ವಿಜ್ಞಾನ ವಿಭಾಗದ ಅಮೃತ ಲಕ್ಷ್ಮೀ, ಸಾನ್ವಿ ಮತ್ತು ವಾಣಿಜ್ಯ ವಿಭಾಗದ ಗೌತಮ್,ಪ್ರತಿಭಾ ಇವರಿಗೆ ನೆನಪಿನ ಕಾಣಿಕೆ ನೀಡಿ ಪ್ರೋತ್ಸಾಹಿಸಲಾಯಿತು.

ಸಂಸ್ಥೆಯ ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಾದ ಭವಿಷ್ ಸ್ವಾಗತಿಸಿ ಲೇಖನ್ ವಂದಿಸಿದರು.ನಿಶಾಂತ್ ನಿರೂಪಣೆ ಗೈದರು.

Highslide for Wordpress Plugin