ಬೋಧಕ ವೃಂದದವರಿಗೆ ವಿಶೇಷ ತರಬೇತಿ

ನಂತೂರು, ಜು.9 : ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಬೋಧಕ ವೃಂದವದರಿಗೆ ಎರಡು ದಿನಗಳ ವಿಶೇಷ ತರಬೇತಿ ನೀಡಲಾಯಿತು.

ರಾಷ್ಟ್ರೀಯ ತರಬೇತುದಾರ, ಸಂಸ್ಥೆಯ ಶೈಕ್ಷಣಿಕ ಸಲಹೆಗಾರ, ವಿದ್ಯಾನಂದದ ಕೋಆರ್ಡಿನೇಟರ್ ಶ್ರೀ ಯು.ಎಸ್.ವಿಶ್ವೇಶ್ವರ ಭಟ್ ಅವರು ತರಬೇತಿ ನೀಡಿದರು.

ಮಳೆಗೆ ಕರಾವಳಿಯಲ್ಲಿ ‌ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿತ್ತು. ಆ ದಿನಗಳಲ್ಲಿ ಅಂದರೆ ಶುಕ್ರವಾರ ಮತ್ತು ಶನಿವಾರ(2023, July 7th and 8th) ಶಿಕ್ಷಕರಿಗೆ ಈ ಶಿಬಿರ ಏರ್ಪಡಿಸಲಾಗಿತ್ತು. ಪ್ರಾಂಶುಪಾಲರು ಮತ್ತು ಉಪನ್ಯಾಸಕ ವೃಂದದವರು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡು ಶಿಬಿರವನ್ನು ಯಶಸ್ವಿಗೊಳಿಸಿದರು.

ಪ್ರಾಂಶುಪಾಲರಾದ ಗಂಗಾರತ್ನ ಮುಗುಳಿ ಅವರು ಸ್ವಾಗತಿಸಿ, ಉಪಪ್ರಾಂಶುಪಾಲರಾದ ಗಾಯತ್ರಿ ಶೆಣೈ ವಂದಿಸಿದರು.

Highslide for Wordpress Plugin