ಮಾದಕ ವಸ್ತುಗಳ ಬಗ್ಗೆ ಜಾಗೃತಿ ಅಭಿಯಾನ

ಮಾದಕ ವಸ್ತು ವಿತರಕರ ಜಾಲ ಪತ್ತೆಯಾಗಬೇಕು : ಕಸ್ತೂರಿ ಪಂಜ

ನಂತೂರು, ಜ.28 : ವಿದ್ಯಾರ್ಥಿಗಳು ಪಠ್ಯ, ಪಠ್ಯೇತರ ಚಟುವಟಿಕೆಗಳೊಂದಿಗೆ ಉತ್ತಮ ಗುಣ ನಡತೆಗಳ ಮೂಲಕ ಹೆತ್ತವರಿಗೆ, ಗುರುಹಿರಿಯರಿಗೆ, ವಿದ್ಯಾ ಸಂಸ್ಥೆಗೆ ಕೀರ್ತಿ ತರಬೇಕು. ಮಾದಕ ದ್ರವ್ಯ ವ್ಯಸನಗಳಿಗೆ ಬಲಿಯಾಗಬಾರದು. ಪೊಲೀಸ್ ಇಲಾಖೆ ಈ ಬಗ್ಗೆ ಎಚ್ಚರಿಕೆ ನೀಡುವುದರ ಜತೆಗೆ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮಕೈಗೊಳ್ಳುತ್ತದೆ. ಇಲಾಖೆಯು ಮಾದಕ ವಸ್ತು ವಿತರಕರ ಜಾಲವನ್ನು ಪತ್ತೆ ಮಾಡಬೇಕು ಎಂದು ದ.ಕ.ಜಿ.ಪಂ.ಉಪಾಧ್ಯಕ್ಷೆ ಕಸ್ತೂರಿ ಪಂಜ ಒತ್ತಾಯಿಸಿದರು.
         ಅವರು ಸೋಮವಾರ ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ಶಂಕರಶ್ರೀ ಸಭಾಭವನದಲ್ಲಿ ಶ್ರೀ ಭಾರತೀ ಪದವಿ ಕಾಲೇಜು, ಎನ್ನೆಸ್ಸೆಸ್ ಘಟಕ, ವಿಮೆನ್ ಎಂಪವರ್‌ಮೆಂಟ್ ಸೆಲ್, ಪಿಯು ಕಾಲೇಜು ಮತ್ತು ಮಂಗಳೂರು ಇಕೊನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆ ಜಂಟಿಯಾಗಿ ಹಮ್ಮಿಕೊಂಡ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಅಭಿಯಾನ, ಸೈಬರ್ ಕ್ರೈಮ್ ಮತ್ತು ಮಹಿಳೆಯರ ಸ್ವ-ರಕ್ಷಣೆ ಜಾಗೃತಿ ಅಭಿಯಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
       ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಆಸರೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಡಾ.ಆಶಾಜ್ಯೋತಿ ರೈ ಮಾಲಾಡಿ ಅವರು ಮಾತನಾಡಿ, ಮಾದಕ ದ್ರವ್ಯಗಳನ್ನು ಸೇವಿಸಿದ ಬಳಿಕ ಮೆದುಳು ನಿಯಂತ್ರಣ ಕಳೆದುಕೊಳ್ಳುತ್ತದೆ. ಆಗ ಆರೋಗ್ಯ ಹದಗೆಡುತ್ತದೆ. ಯುವಕರೂ ಯುವತಿಯರೂ ಈ ಜಾಲದಲ್ಲಿ ಸಿಲುಕಿ, ಹೊರಬರಲಾರದೇ ಚಡಪಡಿಸುವಂತಾಗುತ್ತದೆ. ಆದುದರಿಂದ ಅಂತ ಮೋಸದ ಜಾಲಕ್ಕೆ ಬಲಿಬೀಳಬಾರದು. ಮಹಿಳೆಯರು ಯಾವುದೇ ಆಮಿಷಗಳಿಗೆ ಬಲಿಯಾಗದೇ ಸ್ವ-ರಕ್ಷಣೆಯನ್ನು ಮಾಡಿಕೊಳ್ಳಬೇಕು ಎಂದು ಹೇಳಿದರು.
      ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಮಂಗಳೂರು ಇಕೊನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್ ರಾಮಕೃಷ್ಣ ಕೆ.ಕೆ. ಅವರು ಮಾತನಾಡಿ ದ.ಕ.ಜಿಲ್ಲೆ ಮಾದಕ ದ್ರವ್ಯಜಾಲದಲ್ಲಿ ಸಿಲುಕದೇ ಉತ್ತಮ ಜಿಲ್ಲೆಯೆಂದು ಹೆಸರುಗಳಿಸಬೇಕು. ಅದಕ್ಕೆ ಕಾಲೇಜುಗಳಲ್ಲಿರುವ ಯುವಕರು ಜಾಗರೂಕರಾಗಬೇಕು. ಮೋಸ, ವಂಚನೆಗಳಿಗೆ ಬಲಿಯಾಗಬಾರದು ಎಂದು ಎಚ್ಚರಿಸಿದರು.
        ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಮಂಗಳೂರು ಇಕೊನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆಯ ಲಕ್ಷ್ಮೀಶ ಎ. ಅವರು ಮಾತನಾಡಿ, ಅನೇಕ ವಿದ್ಯಾರ್ಥಿಗಳು ಈ ಜಾಲದಲ್ಲಿ ಸಿಲುಕಿರುವುದನ್ನು ಪತ್ತೆ ಹಚ್ಚಿದ್ದೇವೆ. ಅದನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿ, ಬಂಽಸುತ್ತೇವೆ. ಆಗ ಯುವಕರು ತಮ್ಮ ಜೀವನಪರ್ಯಂತ ಪಶ್ಚಾತ್ತಾಪ ಪಡಬೇಕಾಗುತ್ತದೆ. ಆದುದರಿಂದ ಯುವಕರು ಎಚ್ಚತ್ತುಕೊಳ್ಳಬೇಕು. ಉತ್ತಮ ಸಂಸ್ಕಾರ, ಸಂಸ್ಕೃತಿಯನ್ನು ನೀಡುವ ಭಾರತೀ ಸಮೂಹ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಪಡೆಯುತ್ತಿರುವುದು ಇಲ್ಲಿನ ವಿದ್ಯಾರ್ಥಿಗಳ ಭಾಗ್ಯ ಎಂದು ಹೇಳಿದರು.
       ಆಡಳಿತಾಽಕಾರಿ ಪ್ರೊ.ಕೆ.ಶಂಕರ ಭಟ್, ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಈಶ್ವರಪ್ರಸಾದ್ ಎ., ಪಪೂ ಕಾಲೇಜು ಪ್ರಾಂಶುಪಾಲೆ ವಿದ್ಯಾ ಭಟ್, ಹಿರಿಯ ಉಪನ್ಯಾಸಕಿ ಸುಭದ್ರಾ ಭಟ್, ಗಣೇಶ್ ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ವಿತರಿಸಲಾಯಿತು.
ಎನ್ನೆಸ್ಸೆಸ್ ಶಿಬಿರಾಽಕಾರಿ ಅಶೋಕ್ ಎಸ್. ಸ್ವಾಗತಿಸಿದರು. ಉಪನ್ಯಾಸಕಿ ಗಂಗಾರತ್ನ ಮುಗುಳಿ . ವಂದಿಸಿದರು. ವಿದ್ಯಾರ್ಥಿ ನಾಯಕಿ ಜಾಹ್ನವಿ ನಿರೂಪಿಸಿದರು.

 

Highslide for Wordpress Plugin