ಮಾನವ ಸಂಪನ್ಮೂಲ ಅಭಿವೃದ್ಧಿ ಘಟಕ ಪ್ರೇರಣಾ ನೇತೃತ್ವದಲ್ಲಿ ಕಾರ್ಯಾಗಾರ – 2019

ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ಮಾನವ ಸಂಪನ್ಮೂಲ ಅಭಿವೃದ್ಧಿ ಘಟಕ ಪ್ರೇರಣಾ ನೇತೃತ್ವದಲ್ಲಿ ಉಂಡೆಮನೆ ದಿ.ಶಂಭು ಶರ್ಮ ಪ್ರತಿಷ್ಠಾನದ ವತಿಯಿಂದ ಶ್ರೀ ಭಾರತೀ ಪದವಿ ಕಾಲೇಜಿನ ಅಂತಿಮ ವಿಭಾಗದ ವಿದ್ಯಾರ್ಥಿಗಳಿಗೆ ಉದ್ಯೋಗ ಸಂದರ್ಶನವನ್ನು ಎದುರಿಸುವ ಕುರಿತು ಮಾರ್ಗದರ್ಶನವನ್ನು ಶ್ರೀ ಭಾರತೀ ಸಮೂಹ ಸಂಸ್ಥೆಗಳ ಮಾನವ ಸಂಪನ್ಮೂಲ ಅಭಿವೃದ್ಧಿ ಘಟಕ ಪ್ರೇರಣಾದ ಮಾರ್ಗದರ್ಶಕರಾದ ಪ್ರೊ. ಯು.ವಿಶ್ವೇಶ್ವರ ಭಟ್ ಇವರು ಹಾಗೂ ಪ್ರಥಮ ಹಾಗೂ ದ್ವಿತೀಯ ವಿಭಾಗದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಸಂವಹನ ಕೌಶಲ್ಯದ ಕುರಿತು ತರಬೇತಿ ಕಾರ್ಯಕ್ರಮವನ್ನು ರಶ್ಮಿ, ಇಂಗ್ಲಿಷ್ ಪ್ರಾಧ್ಯಾಪಕರು, ವಿವೇಕಾನಂದ ಪ.ಪೂ. ಕಾಲೇಜು, ಪುತ್ತೂರು ಇವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಾಗಾರದಲ್ಲಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಈಶ್ವರ ಪ್ರಸಾದ್, ಶ್ರೀ ಭಾರತೀ ಪದವಿ ಕಾಲೇಜಿನ ಮಾನವ ಸಂಪನ್ಮೂಲ ಅಭಿವೃದ್ಧಿ ಘಟಕದ ಸಂಯೋಜಕರಾದ ಶ್ರೀ ಪ್ರವೀಣ್, ಉಪನ್ಯಾಸಕ ವೃಂದ ಹಾಗೂ ಗ್ರಂಥಪಾಲಕರು ಉಪಸ್ಥಿತರಿದ್ದರು. ವಾಣಿಜ್ಯ ಉಪನ್ಯಾಸಕರಾದ ಶ್ರೀ ಅಶೋಕ್ ಸ್ವಾಗತಿಸಿ, ವಿದ್ಯಾರ್ಥಿನಿ ಕು. ಸುಶ್ಮಿತಾ ಬಿ.ಕೆ ವಂದನಾರ್ಪಣೆಗೈದರು.

Highslide for Wordpress Plugin