ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ನಂತೂರು, ಮಾ.1೦ :ದಿನಾಂಕ ೦9.೦3.2೦18ರಂದು ಶ್ರೀ ಭಾರತೀ ಕಾಲೇಜಿನಲ್ಲಿ sಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ವಿಧಾನ-ಈ ಕುರಿತು ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಎಂ.ಬಿ.ಎ. ವಿಭಾಗದ ನಿರ್ದೇಶಕರಾದ ಡಾ. ಶೇಖರ್ ಎಸ್. ಐಯ್ಯರ್ ಇವರು ವಿದ್ಯಾರ್ಥಿಗಳಿಗೆ ಮಾಹಿತಿಗಳನ್ನು ಒದಗಿಸಿದರು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವಾಗ ಅನುಸರಿಸಬೇಕಾದ ವಿಧಾನಗಳು, ವಿಷಯಕ್ಕೆ ಪೂರಕವಾದ ಪುಸ್ತಕಗಳು, ಪತ್ರಿಕೆಗಳು ಮತ್ತು ಸಾಮಾನ್ಯ ಜ್ಞಾನವನ್ನು ಹೆಚ್ಚಿಸಿಕೊಳ್ಳುವ ಕುರಿತು ವಿದ್ಯಾರ್ಥಿಗಳಿಗೆ ವಿವರಣೆ ನೀಡಿದರು. ಪರೀಕ್ಷಾ ಪ್ರಶ್ನೆಪತ್ರಿಕೆಗೆ ಯಾವ ರೀತಿ ಉತ್ತರಿಸಬೇಕು ಹಾಗೂ ಪ್ರಶ್ನೆಪತ್ರಿಕೆಯಲ್ಲಿರುವ ವಿವಿಧ ವಿಭಾಗಗಳ ಕುರಿತು ವಿವರಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಈಶ್ವರಪ್ರಸಾದ್ ಅವರು ಸ್ವಾಗತಿಸಿ, ಉಪನ್ಯಾಸಕಿ ಬಿಂದು ವಂದಿಸಿದರು.

Highslide for Wordpress Plugin