ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರಿಂದ ವಿದ್ಯಾಸಂಸ್ಥೆಯಲ್ಲಿ ಗೋಶಾಲೆ ಲೋಕಾರ್ಪಣೆ

ನಂತೂರು, ಫೆ.22 : ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಆವರಣದಲ್ಲಿ, ಸಂಸದ ನಳಿನ್ ಕುಮಾರ್ ಕಟೀಲು ಅವರ ಶಿಫಾರಸಿನ ಮೇರೆಗೆ, ಕುದುರೆಮುಖ ಕಬ್ಬಿಣ ಮತ್ತು ಅದಿರು ಕಂಪನಿ ಲಿಮಿಟೆಡ್ (ಕೆಐಒಸಿಎಲ್) ಅವರ ಸಿಎಸ್ಆರ್ ಅನುದಾನದಲ್ಲಿ ನಿರ್ಮಾಣವಾದ ಗೋಶಾಲೆಯನ್ನು ಲೋಕಾರ್ಪಣೆಗೊಳಿಸಲಾಯಿತು.

ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಗೋಶಾಲೆಯನ್ನು ಲೋಕಾರ್ಪಣೆಗೈದರು.

ಕೆಐಒಸಿಎಲ್ ಎಚ್.ಆರ್. ವಿಭಾಗದ ಸೀನಿಯರ್ ಮೆನೇಜರ್ ಮುರುಗೇಶ್ ಎಸ್., ಅಡ್ಮಿನಿಸ್ಟ್ರೇಷನ್ ಆಫೀಸರ್ ಗಣೇಶ್ ಶೆಟ್ಟಿಗಾರ್,
ಸಂಸದ ನಳಿನ್ ಕುಮಾರ್ ಕಟೀಲು ಅವರ ಆಪ್ತ ಕಾರ್ಯದರ್ಶಿ ನರಸಿಂಹ ಹೆಗಡೆ ಕೆರೆಮನೆ ಮತ್ತು ಗೋಪಾಲಕ ಸತೀಶ ಶಾಸ್ತ್ರಿ ಅವರನ್ನು ಶ್ರೀಗಳು ಗೌರವಿಸಿದರು.

ಅಧ್ಯಕ್ಷ ಹಾರಕರೆ ನಾರಾಯಣ ಭಟ್, ಕಾರ್ಯಾಧ್ಯಕ್ಷ ಗಣೇಶಮೋಹನ ಕಾಶಿಮಠ, ಕಾರ್ಯದರ್ಶಿ ಶ್ರೀಕೃಷ್ಣ ನೀರಮೂಲೆ, ಕೋಶಾಧಿಕಾರಿ ಉದಯಶಂಕರ್ ನೀರ್ಪಾಜೆ, ಕಾರ್ಯಾಲಯ ಕಾರ್ಯದರ್ಶಿ ಎಂ.ಟಿ.ಭಟ್, ಸದಸ್ಯ ರಮೇಶ್ ಭಟ್ ಸರವು, ಮಂಗಳೂರು ಹವ್ಯಕ ಸಭಾ ಅಧ್ಯಕ್ಷ ಡಾ.ಬಿ.ರಾಜೇಂದ್ರಪ್ರಸಾದ್, ಮಾಜಿ ಅಧ್ಯಕ್ಷ ಬಾಲಸುಬ್ರಹ್ಮಣ್ಯ ಕಬೆಕ್ಕೋಡು, ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಕಾಶಿಮಠ, ದ.ಕ.ಮತ್ತು ಕಾಸರಗೋಡು ಹವ್ಯಕ ಮಹಾಜನಸಭಾ ಇದರ ಅಧ್ಯಕ್ಷ ಎನ್.ಕೃಷ್ಣ ಭಟ್, ಮಂಗಳೂರು ಪ್ರಾಂತ್ಯದ ಮಾತೃತ್ವಂ ಅಧ್ಯಕ್ಷೆ ಸುಮಾ ರಮೇಶ್, ಸಾವಿತ್ರಿ ಎಂ.ಭಟ್ ಮುಳಿಯ, ಸುಬ್ರಾಯ ಅಗ್ನಿಹೋತ್ರಿ, ಶ್ರೀ ಚರಣ ಖಂಡದ ಸಂಯೋಜಕ ದಿನೇಶ್, ಅರವಿಂದ ಬಂಗಲಗಲ್ಲು, ಸುರೇಶ ಆಡಗೋಡಿ, ಮಂಗಳೂರು ಹವ್ಯಕ ಮಂಡಲ ಸಂಘಟನ ಕಾರ್ಯದರ್ಶಿ ವಿಶ್ವನಾಥ್ ಕೆ.ಜಿ., ವೈದಿಕ‌ಪ್ರಧಾನ ಅಮೈ ಶಿವಪ್ರಸಾದ ಭಟ್, ರುದ್ರ ಸಮಿತಿ ಅಧ್ಯಕ್ಷ ಡಾ.ಐ.ಬಿ.ಪಳ್ಳಾದೆ, ಅಧ್ಯಕ್ಷರು, ಪದಾಧಿಕಾರಿಗಳು ಸರ್ವ ಸದಸ್ಯರು, ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ.ಜೀವನ್ ದಾಸ್, ಗಂಗಾರತ್ನ ಮುಗುಳಿ ಮತ್ತಿತರರು ಉಪಸ್ಥಿತರಿದ್ದರು.

Highslide for Wordpress Plugin