ಸಿಡಿಎಸ್ ಜನರಲ್ ಬಿಪಿನ್ ರಾವತ್ ಹಾಗೂ ಸೈನಿಕರಿಗೆ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ದೀಪ ಬೆಳಗಿಸಿ ಗೌರವಪೂರ್ವಕ ಶ್ರದ್ಧಾಂಜಲಿ

ಮಂಗಳೂರು ನಂತೂರು ಶ್ರೀ ಭಾರತೀ ಕಾಲೇಜಿನಲ್ಲಿ ದಿನಾಂಕ 16-12-21 ರಂದು, ದೇಶಕ್ಕಾಗಿ ಪ್ರಾಣಾರ್ಪಣೆಗೈದ ಸಿಡಿಎಸ್ ಜನರಲ್ ಬಿಪಿನ್ ರಾವತ್ ಹಾಗೂ ಸೈನಿಕರಿಗೆ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ದೀಪ ಬೆಳಗಿಸಿ ಗೌರವಪೂರ್ವಕ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ರಾಸೇಯೋ ಘಟಕದ ಯೋಜನಾಧಿಕಾರಿ ಶ್ರೀ ಪ್ರತಿಮ್‌ಕುಮಾರ್ ಕೆ.ಎಸ್. ಅವರು ದೇಶಕ್ಕೆ ಸೇವೆ ಸಲ್ಲಿಸಿದ ನಮ್ಮ ರಾಷ್ಟ್ರ ರಕ್ಷಣಾ ಪಡೆಗಳ ಕರ್ತವ್ಯ ಮತ್ತು ವಿದ್ಯಾರ್ಥಿಗಳ ಜವಾಬ್ದಾರಿಗಳ ಬಗ್ಗೆ ತಿಳಿಸಿದರು.

ರಾಸೇಯೋ ಘಟಕದ ನಾಯಕಿ ಆಶಿತಾ, ಜನರಲ್ ಬಿಪಿನ್ ರಾವತ್ ಅವರ ಬಗ್ಗೆ ವಿವರಗಳನ್ನು ನೀಡಿದರು. ನಾಯಕ ದೀಕ್ಷಿತ್ ಸಹಕರಿಸಿದರು. ಎಲ್ಲ ತರಗತಿಗಳ ವಿದ್ಯಾರ್ಥಿ ನಾಯಕರು ದೀಪ ಬೆಳಗಿಸುವುದರೊಂದಿಗೆ ಮೌನ ಪ್ರಾರ್ಥನೆ ಮಾಡಲಾಯಿತು.

Highslide for Wordpress Plugin