ಸಂಭ್ರಮದ ಸ್ವಾತಂತ್ರ್ಯೋತ್ಸವ

ಪ್ರತಿಯೊಂದು ವಿದ್ಯಾರ್ಥಿಯು ಸ್ಕೌಟ್ಸ್ ಹಾಗೂ ಗೈಡ್ಸ್‌ನ ಪ್ರಯೋಜನವನ್ನು ಪಡೆಯಬೇಕು ಎಂದು ಶ್ರೀ ಭಾರತೀ ಸಮೂಹ ಸಂಸ್ಥೆಯ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ನೆರವೇರಿಸುತ್ತಾ ಶ್ರೀ ಎನ್.ಜಿ. ಮೋಹನ್‌ರವರು ವಿದ್ಯಾರ್ಥಿಗಳಿಗೆ ಕರೆನೀಡಿದರು.

 ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಚಿಕ್ಕ ಚೊಕ್ಕ ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ನೆರೆದವರನ್ನು ರಂಜಿಸಿದರು.  ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.ಎನ್. ಭಟ್ಟರು ಅತಿಥಿಗಳನ್ನು ಸ್ವಾಗತಿಸಿ ಕೊನೆಯಲ್ಲಿ ವಂದಿಸಿದರು. ಶ್ರೀ ಭಾರತೀ ಸಮೂಹ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಕೆ.ಎಸ್. ಭಟ್, ಕಾರ್ಯದರ್ಶಿಯವರಾದ ಶ್ರೀ ವೈ.ವಿ. ಭಟ್ ಹಾಗೂ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಎಲ್ಲರಿಗೂ ಸಿಹಿ ವಿತರಿಸಲಾಯಿತು.

Highslide for Wordpress Plugin